ಬ್ರಿಟಿಷ್ ಆಳ್ವಿಕೆಯ ಸಮಯದ ಸಾಗುವಳಿ ಭೂಮಿಯ ತೆರಿಗೆ ಪಾವತಿಯ ವಿಭಿನ್ನ ಪದ್ದತಿಗಳಲ್ಲಿ ಪ್ರಮುಖವಾದದ್ದು ರೈತವಾರಿ ಪದ್ಧತಿ. ಬಾರಾಮಹಲ್ ಜಿಲ್ಲೆಯಲ್ಲಿ ಆಗಿನ ಆಡಳಿತಾಧಿಕಾರಿಯಾಗಿದ್ದ ಕ್ಯಾಪ್ಟನ್ ಅಲೆಕ್ಸಾಂಡರ್ ಜಾರಿ ಮಾಡಿದ್ದ ಹಲವಾರು ಭೂ ಸುಧಾರಣಾ ನಿಯಮಾವಳಿಗಳನ್ನು ಅನುಸರಿಸಿ ಆಗಿನ ಮದ್ರಾಸ್ ನ ಗವರ್ನರ್ ಸರ್. ಥಾಮಸ್ ಮುನ್ರೋ ಚಾಲ್ತಿಗೆ ತಂದ ಪದ್ಧತಿ ಇದಾಗಿದೆ[೧]. ಅದಕ್ಕೂ ಹಿಂದೆ ಅಂದರೆ ಮುಘಲ್ ಆಳ್ವಿಕೆಯಿದ್ದ ಕಾಲದಲ್ಲಿ ದೆಹಲಿಯ ಚಕ್ರವರ್ತಿಗಳು ಆಡಳಿತದ ಕೇಂದ್ರ ಬಿಂದುಗಳಾಗಿದ್ದು ಸಾಗುವಳಿ ಭೂಮಿ ಸಂಬಂಧಿತ ತೆರಿಗೆಗಳ ವಸೂಲಾತಿಗೆ ವಿಶೇಷ ವ್ಯವಸ್ಥೆಯೊಂದನ್ನು ಪರಿಚಯಿಸಿದ್ದರು. ಚಕ್ರವರ್ತಿಗಳು ಆಡಳಿತಾತ್ಮಕ ದೃಷ್ಟಿಯಲ್ಲಿ ಪ್ರಮುಖವಾಗಿದ್ದ ಕಾರಣ ಅವರಾಳುತ್ತಿದ್ದ ಪ್ರಾಂತದ ಅನೇಖ ಕಾರ್ಯ ಕಟ್ಟಳೆಗಳು ಅವರ ದಿನ ನಿತ್ಯದ ಕಾರ್ಯಸೂಚಿಗಳಲ್ಲಿರುತ್ತಿದ್ದವು. ಪ್ರತೀ ಉಪ ಪ್ರಾಂತಕ್ಕೂ ಒಬ್ಬ ಅಧಿಕಾರಿಯನ್ನು ನೇಮಿಸುತ್ತಿದ್ದರು ಹಾಗು ಆತನನ್ನು 'ಸುಬೇದಾರ್' ಎಂದು ಕರೆಯಲಾಗುತ್ತಿತ್ತು. ಸುಬೇದಾರನಿಗೆ ಒಂದು ಪ್ರಾಂತದ ಸಂಪೂರ್ಣ ಸಾಗುವಳಿ ಭೂಮಿಯನ್ನು ಕೊಡ ಮಾಡಲಾಗುತ್ತಿತ್ತು. ಆ ಭೂಮಿಯನ್ನು ಸುಬೇದಾರನು ಹಲವಾರು ಜಮೀನುದಾರರಿಗೆ ಹಂಚುತ್ತಿದ್ದನು. ಜಮೀನುದಾರರು ಅದೇ ಭೂಮಿಯನ್ನು ರೈತರಿಗೆ ಹಂಚಿ ಅದರಲ್ಲಿ ಬರುವ ತೆರಿಗೆಯ ಸ್ವಲ್ಪ ಭಾಗವನ್ನು ತಾವು ಇಟ್ಟುಕೊಂಡು ಉಳಿದಿದ್ದನ್ನು ಜಾಗೀರುದಾರರಿಗೆ ಕೊಡುತ್ತಿದ್ದರು. ಅಲ್ಲಿಂದ ಮುಂದೆ ಅದೇ ಧನ ಪ್ರಾಂತದ ಬೊಕ್ಕಸಕ್ಕೆ ಸೇರುತ್ತಿತ್ತು. ಈ ವ್ಯವಸ್ಥೆಯಲ್ಲಿ ಗಮನಿಸಬೇಕಾದ ಬಹು ಮುಖ್ಯ ಅಂಶವೆಂದರೆ ರೈತರಿಗೂ ಹಾಗು ಅವರ ಪ್ರಾಂತದ ಸರ್ಕಾರಕ್ಕೂ ಯಾವುದೇ ನೇರ ಸಂಬಂಧಗಳಿರಲಿಲ್ಲ.
ಆದರೆ ಸರ್ ಥಾಮಸ್ ಮುನ್ರೋ ಪರಿಚಯಿಸಿದ ರೈತವಾರಿ ಪದ್ದತಿಯಲ್ಲಿ ರೈತರೇ ನೇರವಾಗಿ ತೆರಿಗೆಯನ್ನು ಸರ್ಕಾರಕ್ಕೆ ಕಟ್ಟುವ ವ್ಯವಸ್ಥೆಯನ್ನು ಜಾರಿಗೆ ತರಲಾಯಿತು. ತೆರಿಗೆಯ ವಸೂಲಾತಿಗೆಂದೇ ಸರ್ಕಾರದ ಪರವಾಗಿ ಕಲೆಕ್ಟರ್ ಗಳನ್ನೂ ನೇಮಕ ಮಾಡಲಾಯಿತು. ಜೊತೆಗೆ ಹೊಸ ಭೂಮಿಯನ್ನು ಸಾಗುವಳಿಗೆ ಅನುವು ಮಾಡಿಕೊಳ್ಳುವ ಅಥವಾ ಈಗಾಗಲೇ ಸಾಗುವಳಿಯಲ್ಲಿ ಚಾಲ್ತಿಯಲ್ಲಿರುವ ಭೂಮಿಯನ್ನು ಬಿಟ್ಟುಬಿಡುವ ಅವಕಾಶವನ್ನು ರೈತರ ವಿವೇಚನೆಗೇ ಬಿಟ್ಟು ಬಿಡಲಾಯಿತು[೨].
ಸರಿ ಸುಮಾರು ಮೂವತ್ತು ವರ್ಷಗಳ ಕಾಲ ಜಾರಿಯಲ್ಲಿದ್ದ ಈ ತೆರಿಗೆಯ ಪಾವತಿ ಪದ್ಧತಿ ಮೊಘಲ್ ಕಾಲದ ತೆರಿಗೆಯ ಪದ್ದತಿಯ ಹಲವಾರು ಗುಣ ಲಕ್ಷಗಳನ್ನು ಹೊಂದಿತ್ತು. ಬ್ರಿಟಿಷ್ ಭಾರತದ ಕೆಲವೇ ಕೆಲವು ಭಾಗಗಲ್ಲಿ ಜಾರಿಯಾದ ಈ ನಿಯಮ ಆಗ್ಗೆ ಬ್ರಿಟಿಷ್ ಭಾರತದಲ್ಲಿದ್ದ ಎರಡು ಪ್ರಮುಖ ಸಾಗುವಳಿ ಭೂ-ತೆರಿಗೆಯ ವಸೂಲಿ ಪದ್ಧತಿಗಳಲ್ಲಿ ಒಂದಾಗಿತ್ತು. ಈ ತೆರಿಗೆಯು ಬರಿಯ ತೆರಿಗೆಯೆಂದಷ್ಟೇ ಪರಿಗಣಿತವಾಗದೆ ರೈತರ ಹಣವನ್ನು ತೆರಿಗೆಯ, ಭೂಮಿಯ ಬಾಡಿಗೆ ಎಂಬ ಅಂಶಗಈಳೂ ಅದರೊಳಗೆ ಸೇರಿಸಿ ವಸೂಲು ಮಾಡಲಾಗುತ್ತಿತ್ತು. ಭೂತೆರಿಗೆ ಪಾವತಿಗೆ ರೈತರನ್ನೇ ನೇರವಾಗಿ ಹೊಣೆ ಮಾಡಿದ ಕಾರಣ ಈ ಪದ್ದತಿಯನ್ನು ರೈತವಾರಿ ಪದ್ಧತಿ ಎಂದು ಕರೆಯಲಾಯಿತು. ಭಾರತದ ಇನ್ನಿತರ ಭಾಗಗಳಲ್ಲಿ ಜಮೀನುದಾರರ ಮುಖಾಂತರ ರೈತರು ತೆರಿಗೆ ಪಾವತಿ ಮಾಡುತ್ತಿದ್ದರು, ಅಂತಹ ಪದ್ದತಿಯನ್ನು ಜಮೀನ್ದಾರಿ ಪದ್ಧತಿ ಎಂಬುದಾಗಿ ಕರೆಯಲಾಗುತ್ತದೆ. ಬ್ರಿಟಿಷ್ ಭಾರತದ ಬಾಂಬೆ, ಮದ್ರಾಸ್, ಅಸ್ಸಾಂ ಹಾಗು ಬರ್ಮಾ ಪ್ರಾಂತಗಳಲ್ಲಿ ರೈತವಾರಿ ಪದ್ಧತಿ ಜಾರಿಯಲ್ಲಿದ್ದ ಕಾರಣ ಜಮೀನುದಾರರಿಗೆ ಆಸ್ಪದವಿರಲಿಲ್ಲ, ಬದಲಾಗಿ ರೈತರೇ ನೇರವಾಗಿ ಸರ್ಕಾರದ ಸಂಪರ್ಕದಲ್ಲಿರುತ್ತಿದ್ದರು.
ಬಂಗಾಳ ಪ್ರಾಂತ ಹಾಗು ಉತ್ತರಭಾರತ ಭಾಗಗಳಲ್ಲಿ ಜಾರಿಯಲ್ಲಿದ್ದ ಪ್ರಮುಖ ಪದ್ಧತಿ ಜಮೀನ್ದಾರಿ ಪದ್ಧತಿ. ಜಮೀನ್ದಾರಿ ಪದ್ದತಿಯ ಸ್ವರೂಪ ಇಂತಿತ್ತು[೩],
ಬ್ರಿಟಿಷರ ಜಮೀನ್ದಾರಿ ಪದ್ಧತಿಗಿಂತ ಹಿಂದೆ ಇದ್ದ ಅರಸರು/ಮೊಘಲರ ಜಮೀನ್ದಾರಿ ಪದ್ದತಿಯ ಹೊರ ಸ್ವರೂಪ ಹೀಗೆಯೇ ಇದ್ದವಾದರೂ ನಿಯಮಗಳಲ್ಲಿ ಅತೀವ ಕಟ್ಟುಪಾಡುಗಳಿರಲಿಲ್ಲ,
ಬ್ರಿಟೀಷರ ಜಮೀನ್ದಾರಿ ಪದ್ದತಿಗೂ ಹಾಗು ಅದಕ್ಕಿಂತಲೂ ಹಿಂದೆ ಜಾರಿಯಲ್ಲಿದ್ದ ಮೊಘಲ್ ಕಾಲದ ಜಮೀನ್ದಾರಿ ಪದ್ದತಿಗೂ ಇದ್ದ ಪ್ರಮುಖ ವ್ಯತ್ಯಾಸ ಹಾಗು ಅವುಗಳಿಂದ ಉಂಟಾದ ಕೆಲವು ಸಮಸ್ಯೆಗಳು,